July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
error: Content is protected !!