ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!