ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ನಿಡ್ಲೆ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಅಗ್ರಿಲೀಫ್ ಗೆ ಎ.30 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉತ್ಪನ್ನಗಳನ್ನು ಪರಿಶೀಲಿಸಿದ ಅವರು ಉತ್ಪನ್ನದ ಗುಣಮಟ್ಟ ಮತ್ತು ದೇಶ ವಿದೇಶಗಳಲ್ಲಿ ಸಂಸ್ಥೆಯ ಬೆಳವಣಿಗೆಯನ್ನು ಶ್ಲಾಘಿಸಿದರು.

ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್ ಸಂಸ್ಥೆಯ ಸಾಧನೆ ಮತ್ತು ಮುಂದಿನ ಗುರಿಗಳನ್ನು ಸ್ವಾಮೀಜಿಯವರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹ ನಿರ್ದೇಶಕ ಅತಿಶಯ್ ಜೈನ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು , ಸ್ವಾಮೀಜಿಯವರ ಆಶೀರ್ವದ ಪಡೆದರು.

Leave a Comment

error: Content is protected !!