24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು.

ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿ ಪುತ್ರಿ.ಬದನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಡ್-ಗೈಡ್ಸ್ನಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ. ೧೯೮೪-೮೫ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

Related posts

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya
error: Content is protected !!