23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು.

ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿ ಪುತ್ರಿ.ಬದನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಡ್-ಗೈಡ್ಸ್ನಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ. ೧೯೮೪-೮೫ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

Related posts

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya
error: Content is protected !!