September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು.

ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿ ಪುತ್ರಿ.ಬದನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಡ್-ಗೈಡ್ಸ್ನಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ. ೧೯೮೪-೮೫ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

Related posts

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ನಾಳೆ(ಜೂ.13): ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಯಶೋ-ವಿಜಯ ಬದುಕು-ನೆನಪು-ಸ್ಮರಣೆ, ಹಾಗೂ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!