April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

ಬೆಳ್ತಂಗಡಿ: ಸುಮಾರು 21 ವರ್ಷಗಳ ಕಾಲ ಸೈನಿಕರಾಗಿ ದೇಶ ಸೇವೆ ಸಲ್ಲಿಸಿ ಮೇ 2ರಂದು ನಿವೃತ್ತಿಗೊಳ್ಳಲಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ರವರು ಮೇ.2 ರಂದು ನಿವೃತ್ತರಾಗಿ ಮೇ.4 ಕ್ಕೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ಗಣೇಶ್ ಬಿ.ಎಲ್ ರವರು ಡಿಸೆಂಬರ್ 05 2002 ರಲ್ಲಿ ಭಾರತೀಯ ಗಡಿ ರಕ್ಷಣೆಯಲ್ಲಿ ಮುಂಚೂಣಿಯಲ್ಲಿ ಇರುವ ಭಾರತೀಯ ಗಡಿ ರಕ್ಷಣಾ ಪಡೆಗೆ ಸೈನಿಕನಾಗಿ ಸೇರಿಕೊಂಡು ಭಾರತ ಮತ್ತು ಪಾಕಿಸ್ಥಾನದ ಗಡಿ ಪ್ರದೇಶವಾದ ಪಂಜಾಬ್, ರಾಜಸ್ಥಾನ, ಅಸ್ಲಾಂ, ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಉತ್ತರ ಪ್ರದೇಶ, ಮಣಿಪುರ, ದಿಲ್ಲಿ ಮತ್ತು ಬೆಂಗಳೂರು ಇಲ್ಲಿ ತನ್ನ ಕರ್ತವ್ಯ ನಿರ್ವಹಿಸಿದಲ್ಲದೆ, ಬೆಂಗಳೂರಿನ ಭಾರತೀಯ ಗಡಿ ಭದ್ರತಾ ಪಡೆಯ ಸಿಗ್ನಲ್ ಟ್ರೈನಿ ಸ್ಕೂಲ್ ಇದರಲ್ಲಿ ಹವಲ್ದಾರ್ ಇನ್‌ಸ್ಟ್ರಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ನಂತರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಯಾಗಿ ಸುಮಾರು 21 ವರ್ಷಗಳ ಕಾಲ ಸೈನಿಕನಾಗಿ ದೇಶ ಸೇವೆ ಸಲ್ಲಿಸಿ ಮೇ 02 ರಂದು ಪಂಜಾಬಿನಲ್ಲಿ ನಿವೃತ್ತಿ ಪಡೆದುಕೊಂಡು ಮೇ 04 ರಂದು ತಾಯಿ ನಾಡು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸ್ವಸ್ತಿಕ್ ಮನೆಯ ಬಿ. ಕೃಷ್ಣಪ್ಪ ನಾಯ್ಕ ಮತ್ತು ಶ್ರೀಮತಿ ವಾರಿಜ .ಕೆ ನಾಯ್ಕ ದಂಪತಿಯ ಪುತ್ರ. ತನ್ನ ಪ್ರಾಥಮಿಕ ವಿಧ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ-ಲಾಯಿಲ ಮತ್ತು ಚರ್ಚ್ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಮಾಡಿದ್ದು, ತನ್ನ ಪ್ರೌಢ ಶಿಕ್ಷಣವನ್ನು ಸಂತ ತೆರೆಸಾ ಪ್ರೌಢ ಶಾಲೆಯಲ್ಲಿ, ಇಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಡಿಪ್ಲೋಮಾ ಪದವಿಯನ್ನು ಮಂಗಳೂರಿನ ಪ್ರತಿಷ್ಠಿತ ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪೂರೈಸಿರುತ್ತಾರೆ.

ಗಣೇಶ್ ಬಿ.ಎಲ್ ಇವರು ಬೆಳ್ತಂಗಡಿಯ ನೋಟರಿ ನ್ಯಾಯಾವಾದಿ ಹಾಗೂ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರ ಸಹೋದರನಾಗಿದ್ದು, ಕುವೆಟ್ಟು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಅನಿತಾ ಕೆ ಇವರ ಪತಿಯಾಗಿರುತ್ತಾರೆ.

Related posts

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya
error: Content is protected !!