23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

ಬೆಳ್ತಂಗಡಿ: ಸುಮಾರು 21 ವರ್ಷಗಳ ಕಾಲ ಸೈನಿಕರಾಗಿ ದೇಶ ಸೇವೆ ಸಲ್ಲಿಸಿ ಮೇ 2ರಂದು ನಿವೃತ್ತಿಗೊಳ್ಳಲಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ರವರು ಮೇ.2 ರಂದು ನಿವೃತ್ತರಾಗಿ ಮೇ.4 ಕ್ಕೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ಗಣೇಶ್ ಬಿ.ಎಲ್ ರವರು ಡಿಸೆಂಬರ್ 05 2002 ರಲ್ಲಿ ಭಾರತೀಯ ಗಡಿ ರಕ್ಷಣೆಯಲ್ಲಿ ಮುಂಚೂಣಿಯಲ್ಲಿ ಇರುವ ಭಾರತೀಯ ಗಡಿ ರಕ್ಷಣಾ ಪಡೆಗೆ ಸೈನಿಕನಾಗಿ ಸೇರಿಕೊಂಡು ಭಾರತ ಮತ್ತು ಪಾಕಿಸ್ಥಾನದ ಗಡಿ ಪ್ರದೇಶವಾದ ಪಂಜಾಬ್, ರಾಜಸ್ಥಾನ, ಅಸ್ಲಾಂ, ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಉತ್ತರ ಪ್ರದೇಶ, ಮಣಿಪುರ, ದಿಲ್ಲಿ ಮತ್ತು ಬೆಂಗಳೂರು ಇಲ್ಲಿ ತನ್ನ ಕರ್ತವ್ಯ ನಿರ್ವಹಿಸಿದಲ್ಲದೆ, ಬೆಂಗಳೂರಿನ ಭಾರತೀಯ ಗಡಿ ಭದ್ರತಾ ಪಡೆಯ ಸಿಗ್ನಲ್ ಟ್ರೈನಿ ಸ್ಕೂಲ್ ಇದರಲ್ಲಿ ಹವಲ್ದಾರ್ ಇನ್‌ಸ್ಟ್ರಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ನಂತರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಯಾಗಿ ಸುಮಾರು 21 ವರ್ಷಗಳ ಕಾಲ ಸೈನಿಕನಾಗಿ ದೇಶ ಸೇವೆ ಸಲ್ಲಿಸಿ ಮೇ 02 ರಂದು ಪಂಜಾಬಿನಲ್ಲಿ ನಿವೃತ್ತಿ ಪಡೆದುಕೊಂಡು ಮೇ 04 ರಂದು ತಾಯಿ ನಾಡು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸ್ವಸ್ತಿಕ್ ಮನೆಯ ಬಿ. ಕೃಷ್ಣಪ್ಪ ನಾಯ್ಕ ಮತ್ತು ಶ್ರೀಮತಿ ವಾರಿಜ .ಕೆ ನಾಯ್ಕ ದಂಪತಿಯ ಪುತ್ರ. ತನ್ನ ಪ್ರಾಥಮಿಕ ವಿಧ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ-ಲಾಯಿಲ ಮತ್ತು ಚರ್ಚ್ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಮಾಡಿದ್ದು, ತನ್ನ ಪ್ರೌಢ ಶಿಕ್ಷಣವನ್ನು ಸಂತ ತೆರೆಸಾ ಪ್ರೌಢ ಶಾಲೆಯಲ್ಲಿ, ಇಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಡಿಪ್ಲೋಮಾ ಪದವಿಯನ್ನು ಮಂಗಳೂರಿನ ಪ್ರತಿಷ್ಠಿತ ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪೂರೈಸಿರುತ್ತಾರೆ.

ಗಣೇಶ್ ಬಿ.ಎಲ್ ಇವರು ಬೆಳ್ತಂಗಡಿಯ ನೋಟರಿ ನ್ಯಾಯಾವಾದಿ ಹಾಗೂ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರವರ ಸಹೋದರನಾಗಿದ್ದು, ಕುವೆಟ್ಟು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಅನಿತಾ ಕೆ ಇವರ ಪತಿಯಾಗಿರುತ್ತಾರೆ.

Related posts

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya
error: Content is protected !!