July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya
error: Content is protected !!