September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಅವರ ನೇತೃತ್ವದಲ್ಲಿ ನಡೆದ ಸ್ಟೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್‌ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲೈ ಮುಹಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

ಷರತ್ತುಗಳು: ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಸದ್ರಿ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು. ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.

ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆದಾರರು ಯಾವುದೇ ಷರತ್ತುಗಳನ್ನು ಉಲ್ಲೇಖಿಸಿದಲ್ಲಿ ಐಪಿಸಿ ಸೆಕ್ಷನ್ 188 ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಿಗೆ ರದ್ದುಪಡಿಸಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Related posts

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!