July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

ಮಿತ್ತಬಾಗಿಲು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಪರಮಾನುಗ್ರಹಪುರಸ್ಸರ ಆಶೀರ್ವಾದಗಳಿಂದ ತತ್ಕರ ಕಮಲ ಸಂಜತರಾದ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿರವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಎ.30 ರಂದು ಭೇಟಿ ನೀಡಿ ಚಂಡಿಕಾ ಹೋಮದ ಪೂರ್ಣಾಹುತಿ ಹಾಗೂ ಶ್ರೀ ದುರ್ಗಾಪರಮೇಶ್ವರೀ ದೇವರ ಪೂಜೆಯನ್ನು ಮಾಡಿ ಆಶೀರ್ವದಿಸಿದರು.

ಬೆಳಿಗ್ಗೆ ಶ್ರೀ ಚಂಡಿಕಾ ಹೋಮ, ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಮೆರವಣಿಗೆ, ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುತುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ, ಧೂಳಿ ಪಾದಪೂಜೆ, ಫಲಸಮರ್ಪಣೆ, , ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಸಮಸ್ತ ಭಕ್ತಜನರಿಗೆ ಶ್ರೀ ಜಗದ್ಗುತುಗಳಿಂದ ಫಲಮಂತ್ರಾಕ್ಷತೆಯು ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿಕೆ ಲೋಕೇಶ್ ರಾವ್, ಬ್ರಹ್ಮ ಕಲಶೋತ್ಸವದ ಸಮಿತಿಯ ಪ್ರಧಾನ ಕಾರ್ಯದರ್ಶಿ ದಾಸಪ್ಪಗೌಡ ಕಾಂಜಾನು, ಪ್ರಧಾನ ಸಂಘಟನಾ ಕಾರ್ಯದರ್ಶಿ ವಿನಯ ಚಂದ್ರ ಸೇನರಬೆಟ್ಟು, ಆಡಳಿತ ಅಧಿಕಾರಿ ಮೋಹನ್ ಬಂಗೇರ, ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ, ಜೀರ್ಣೋದ್ಧಾರ ಮಹಿಳಾ ಸಮಿತಿಯ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಕಿಲ್ಲೂರು, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya
error: Content is protected !!