September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು.

ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿ ಪುತ್ರಿ.ಬದನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಡ್-ಗೈಡ್ಸ್ನಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ. ೧೯೮೪-೮೫ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya
error: Content is protected !!