July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.

ಸ್ಥಳೀಯ ಅಂಗಡಿ ಮಾಲೀಕರು, ಹಿತೈಷಿಗಳು ಆಗಮಿಸಿದರು. ಸಿಬ್ಬಂದಿಗಳಾದ ಶ್ರೀಮತಿ ಕೃಪಾ ಮತ್ತು ಕುಮಾರಿ ಚೈತ್ರಾ ಉಪಸ್ಥಿತರಿದ್ದು ಸಹಕರಿಸಿದರು.

ಸಂಸ್ಥೆಯ ಮಾಲೀಕರಾದ ಶಿತಿಕಂಠ ಭಟ್ ಮಾತನಾಡುತ್ತಾ ನಮ್ಮ ರಕ್ತ ಪರೀಕ್ಷಾ ಕೇಂದ್ರದಲ್ಲಿ ರಕ್ತ,ಕಫ ಪರೀಕ್ಷೆಯನ್ನು ಕ್ಲಪ್ತ ಸಮಯದಲ್ಲಿ ಮಾಡಲಾಗುತ್ತದೆ. ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ದೊರೆಯುತ್ತದೆ ಎಂದು ಹೇಳಿದರು. ಹಾಗೂ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya
error: Content is protected !!