25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಏ.30ರಂದು ಪದ್ಮುಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ವಹಿಸಿದರು. ಅಭಿನಂದನಾ ಭಾಷಣವನ್ನು ಪದ್ಮುಂಜ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ನಾರಾಯಣ ಗೌಡ ವಹಿಸಿದರು.

ವೇದಿಕೆಯಲ್ಲಿ ಪದ್ಮುಂಜ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಗೌಡ, ನಿರ್ದೇಶಕರಾದ ಉದಯ ಭಟ್, ರಾಜೀವ ರೈ, ಕೇಶವ, ಶೀಲಾವತಿ, ವಿನಯಶ್ರೀ, ಉದಯ ಬಿ.ಕೆ, ದಿನೇಶ್ ನಾಯ್ಕ, ಪಿಜಿನ ಮೊಗೇರ, ಸಿಬ್ಬಂದಿಗಳಾದ ಚಿದಾನಂದ ಗೌಡ, ವಿಠ್ಠಲ ನಾಯ್ಕ, ಅಂಕಿತಾ. ಬಿ, ಜ್ಯೋತಿ, ರಾಜವರ್ಮ ಇಂದ್ರ, ಗಣೇಶ್, ರಕ್ಷಿತ್, ವೀರಪ್ಪ , ಬ್ಯಾಂಕಿನ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಉದಯ ಬಿ. ಕೆ ನಿರೂಪಿಸಿ, ಅಂಕಿತಾ ಬಿ ಸನ್ಮಾನ ಪತ್ರ ವಾಚಿಸಿದರು. ರಾಜೀವ ರೈ ಧನ್ಯವಾದವಿತ್ತರು.

ಸಂಜೆ ಶ್ರೀ ರಘುಪತಿ ಕೆ ಅನಾಬೆ ಇವರ ಸೇವಾರ್ಥವಾಗಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಶುಕ್ರನಂದನೆ ಯಕ್ಷಗಾನ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya
error: Content is protected !!