26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಏ.30ರಂದು ಪದ್ಮುಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ವಹಿಸಿದರು. ಅಭಿನಂದನಾ ಭಾಷಣವನ್ನು ಪದ್ಮುಂಜ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ನಾರಾಯಣ ಗೌಡ ವಹಿಸಿದರು.

ವೇದಿಕೆಯಲ್ಲಿ ಪದ್ಮುಂಜ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಗೌಡ, ನಿರ್ದೇಶಕರಾದ ಉದಯ ಭಟ್, ರಾಜೀವ ರೈ, ಕೇಶವ, ಶೀಲಾವತಿ, ವಿನಯಶ್ರೀ, ಉದಯ ಬಿ.ಕೆ, ದಿನೇಶ್ ನಾಯ್ಕ, ಪಿಜಿನ ಮೊಗೇರ, ಸಿಬ್ಬಂದಿಗಳಾದ ಚಿದಾನಂದ ಗೌಡ, ವಿಠ್ಠಲ ನಾಯ್ಕ, ಅಂಕಿತಾ. ಬಿ, ಜ್ಯೋತಿ, ರಾಜವರ್ಮ ಇಂದ್ರ, ಗಣೇಶ್, ರಕ್ಷಿತ್, ವೀರಪ್ಪ , ಬ್ಯಾಂಕಿನ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಉದಯ ಬಿ. ಕೆ ನಿರೂಪಿಸಿ, ಅಂಕಿತಾ ಬಿ ಸನ್ಮಾನ ಪತ್ರ ವಾಚಿಸಿದರು. ರಾಜೀವ ರೈ ಧನ್ಯವಾದವಿತ್ತರು.

ಸಂಜೆ ಶ್ರೀ ರಘುಪತಿ ಕೆ ಅನಾಬೆ ಇವರ ಸೇವಾರ್ಥವಾಗಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಶುಕ್ರನಂದನೆ ಯಕ್ಷಗಾನ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!