26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ.

ಬುಧವಾರ ರಾತ್ರಿ ಕುಂದಾಪುರ ಸಮೀಪದ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣವನ್ನು ತೆಗೆಯುತ್ತಿರುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಇವರು ಧರ್ಮಸ್ಥಳ ಮೇಳದಲ್ಲಿ  ಸುಮಾರು 42 ವರ್ಷಗಳಿಂದ ನಿರಂತರ ಕಲಾವಿದರಾಗಿ  ಸೇವೆ ಸಲ್ಲಿಸಿದ್ದರು.

Related posts

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya
error: Content is protected !!