ಕೊಕ್ಕಡ: ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡುತ್ತಿದ್ದ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೇ.1 ರಂದು ಮಧ್ಯಾಹ್ನ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಸಮರ್ಥರ ಗಾಣಿಗೇರ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಪಟ್ರಮೆ ಹೊಳೆಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿರುವ 40 ಪ್ಲಾಸ್ಟಿಕ್ ಬುಟ್ಟಿಯಷ್ಟು ಮರಳು ರಾಶಿ ಕಂಡುಬಂದಿದ್ದು ಈ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.