23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya
error: Content is protected !!