September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!