24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ಸಂತ ಜೋನರ ದೇವಾಲಯದ ಸಭಾಭವನದಲ್ಲಿ ನಡೆಯಿತು.

ಪುತ್ತೂರು ವಲಯ ಅಧ್ಯಕ್ಷೆ ಲವೀನಾ ಪಿಂಟೊ ಅವರು ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ನೂತನ ಅಧ್ಯಕ್ಷೆಯಾಗಿ ಸರಿತಾ ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿ ಮೆಲ್ವಿನ್ ಡಿಸೋಜ, ಖಜಾಂಜಿಯಾಗಿ ವಿಕ್ಟರ್ ಸುವಾರಿಸ್ ಆಯ್ಕೆಯಾದರು.

ಘಟಕದ ಆತ್ಮೀಕ ನಿರ್ದೇಶಕ ಫಾ. ಜಗದೀಶ್ ಲೂಯಿಸ್ ಪಿಂಟೋ, ಫಾ.ಅಶೋಕ್ ಡಿ’ಸೋಜ, ವಲಯ ಪದಾಧಿಕಾರಿಗಳಾದ ಲ್ಯಾನ್ಸಿ ಮಸ್ಕರೇನ್ಹಸ್, ರೋಶನ್ ಡಾಯಸ್ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸಿಲ್ವೆಸ್ಟರ್ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು.

Related posts

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya
error: Content is protected !!