24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 16 ರಂದು ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿದ್ದು ಆ ಬಳಿಕ ಎಪ್ರಿಲ್ 28 ರವರೆಗೆ ತಾಲೂಕಿನಲ್ಲಿ ಅಕ್ರಮ ಮಧ್ಯ ಸಾಗಾಟ, ಮಧ್ಯ ಮಾರಾಟ, ಮಧ್ಯ ದಾಸ್ತಾನು ಸೇರಿದಂತೆ ಬೆಳ್ತಂಗಡಿ ಅಬಕಾರಿ ಇಲಾಖೆ ಅಧಿಕಾರಿಗಳು ಒಟ್ಟು 144 ಪ್ರಕರಣವನ್ನು ದಾಖಲಿಸಿಕೊಂಡು 816.02 ಲೀಟರ್ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡು. ಇದರಲ್ಲಿ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ರೂಪಾಯಿ 4,45,539 ಆಗಿದೆ.

ಕಾರ್ಯಾಚರಣೆ: 144 ಪ್ರಕರಣದಲ್ಲಿ ಮಂಗಳೂರು ಡಿಸಿ ವಿಶೇಷ ಪತ್ತೆ ದಳದ ಅಧಿಕಾರಿಗಳು 8 ಪ್ರಕರಣ ಪತ್ತೆ ಹಚ್ಚಿದ್ದು. ಬಂಟ್ವಾಳ ಉಪವಿಭಾಗ ಮತ್ತು ಬೆಳ್ತಂಗಡಿ ವಲಯ ಅಬಕಾರಿ ದಳದ ಒಂಟಿ ಕಾರ್ಯಾಚರಣೆಯಲ್ಲಿ 12 ಪ್ರಕರಣ ಪತ್ತೆ ಹಚ್ಚಿದ್ದಾರೆ. ಉಳಿದ ಪ್ರಕರಣಗಳನ್ನು ಬೆಳ್ತಂಗಡಿ ವಲಯ ಅಬಕಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.

Related posts

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!