ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!