25.5 C
ಪುತ್ತೂರು, ಬೆಳ್ತಂಗಡಿ
March 30, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!