23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya
error: Content is protected !!