September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya
error: Content is protected !!