22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya
error: Content is protected !!