ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Leave a Comment

error: Content is protected !!