22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

ಬೆಳ್ತಂಗಡಿ: ಬೀದ‌ರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ ಗೆಲ್ಲಿಸುವಂತೆ ಬೀದರ್ ಲೋಕಸಭಾ ಕ್ಷೇತ್ರದ ಮತದಾರರಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರೊಂದಿಗೆ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಮಾಜಿ ಶಾಸಕ ಎಂ.ವೈ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ, ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya
error: Content is protected !!