September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 16 ರಂದು ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿದ್ದು ಆ ಬಳಿಕ ಎಪ್ರಿಲ್ 28 ರವರೆಗೆ ತಾಲೂಕಿನಲ್ಲಿ ಅಕ್ರಮ ಮಧ್ಯ ಸಾಗಾಟ, ಮಧ್ಯ ಮಾರಾಟ, ಮಧ್ಯ ದಾಸ್ತಾನು ಸೇರಿದಂತೆ ಬೆಳ್ತಂಗಡಿ ಅಬಕಾರಿ ಇಲಾಖೆ ಅಧಿಕಾರಿಗಳು ಒಟ್ಟು 144 ಪ್ರಕರಣವನ್ನು ದಾಖಲಿಸಿಕೊಂಡು 816.02 ಲೀಟರ್ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡು. ಇದರಲ್ಲಿ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ರೂಪಾಯಿ 4,45,539 ಆಗಿದೆ.

ಕಾರ್ಯಾಚರಣೆ: 144 ಪ್ರಕರಣದಲ್ಲಿ ಮಂಗಳೂರು ಡಿಸಿ ವಿಶೇಷ ಪತ್ತೆ ದಳದ ಅಧಿಕಾರಿಗಳು 8 ಪ್ರಕರಣ ಪತ್ತೆ ಹಚ್ಚಿದ್ದು. ಬಂಟ್ವಾಳ ಉಪವಿಭಾಗ ಮತ್ತು ಬೆಳ್ತಂಗಡಿ ವಲಯ ಅಬಕಾರಿ ದಳದ ಒಂಟಿ ಕಾರ್ಯಾಚರಣೆಯಲ್ಲಿ 12 ಪ್ರಕರಣ ಪತ್ತೆ ಹಚ್ಚಿದ್ದಾರೆ. ಉಳಿದ ಪ್ರಕರಣಗಳನ್ನು ಬೆಳ್ತಂಗಡಿ ವಲಯ ಅಬಕಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!