23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 16 ರಂದು ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿದ್ದು ಆ ಬಳಿಕ ಎಪ್ರಿಲ್ 28 ರವರೆಗೆ ತಾಲೂಕಿನಲ್ಲಿ ಅಕ್ರಮ ಮಧ್ಯ ಸಾಗಾಟ, ಮಧ್ಯ ಮಾರಾಟ, ಮಧ್ಯ ದಾಸ್ತಾನು ಸೇರಿದಂತೆ ಬೆಳ್ತಂಗಡಿ ಅಬಕಾರಿ ಇಲಾಖೆ ಅಧಿಕಾರಿಗಳು ಒಟ್ಟು 144 ಪ್ರಕರಣವನ್ನು ದಾಖಲಿಸಿಕೊಂಡು 816.02 ಲೀಟರ್ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡು. ಇದರಲ್ಲಿ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ರೂಪಾಯಿ 4,45,539 ಆಗಿದೆ.

ಕಾರ್ಯಾಚರಣೆ: 144 ಪ್ರಕರಣದಲ್ಲಿ ಮಂಗಳೂರು ಡಿಸಿ ವಿಶೇಷ ಪತ್ತೆ ದಳದ ಅಧಿಕಾರಿಗಳು 8 ಪ್ರಕರಣ ಪತ್ತೆ ಹಚ್ಚಿದ್ದು. ಬಂಟ್ವಾಳ ಉಪವಿಭಾಗ ಮತ್ತು ಬೆಳ್ತಂಗಡಿ ವಲಯ ಅಬಕಾರಿ ದಳದ ಒಂಟಿ ಕಾರ್ಯಾಚರಣೆಯಲ್ಲಿ 12 ಪ್ರಕರಣ ಪತ್ತೆ ಹಚ್ಚಿದ್ದಾರೆ. ಉಳಿದ ಪ್ರಕರಣಗಳನ್ನು ಬೆಳ್ತಂಗಡಿ ವಲಯ ಅಬಕಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya
error: Content is protected !!