ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ.

ಬುಧವಾರ ರಾತ್ರಿ ಕುಂದಾಪುರ ಸಮೀಪದ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣವನ್ನು ತೆಗೆಯುತ್ತಿರುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಇವರು ಧರ್ಮಸ್ಥಳ ಮೇಳದಲ್ಲಿ  ಸುಮಾರು 42 ವರ್ಷಗಳಿಂದ ನಿರಂತರ ಕಲಾವಿದರಾಗಿ  ಸೇವೆ ಸಲ್ಲಿಸಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೆ.3: ಬೈಂದೂರಿನಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತ್ಯುತ್ಸವ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!