23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ ದೂರು ನೀಡಿದ್ದಾರೆ.


ಸೇಸಮ್ಮ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಾನು ತನ್ನ ಕಿರಿಯ ಮಗ ಹರೀಶನೊಂದಿಗೆ ವಾಸವಾಗಿದ್ದು, ಎ.30 ರಂದು ರಾತ್ರಿ, ಪೂಜಾ ಕಾರ್ಯಕ್ರಮದ ನಿಮಿತ್ತ, ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಏರ್ಪಡಿಸಿದ್ದೇವು. ಈ ವೇಳೆ ಕುಟುಂಬಸ್ಥರಾದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣುಗೌಡ, ಹರೀಶ್ ಮತ್ತು ಪುಷ್ಪ ಎಂಬವರುಗಳು, ನಾನು ವಾಸಿಸುವ ಕೊಠಡಿಯ ಬಳಿಗೆ ಬಂದು ಹರೀಶನಿಗೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಸ್ವಲ್ಪ ಸಮಯದ ಬಳಿಕ ಯೋಗೀಶ ಎಂಬಾತ ಬಂದು, ಹರೀಶನಿಗೆ ಹಾಗೂ ಆತನ ಭಾವ ದೀಕ್ಷಿತ್ ಎಂಬಾತನಿಗೆ ಹಲ್ಲೆ ನಡೆಸಿದ್ದು, ತಡೆಯಲು ಬಂದ ನನ್ನನ್ನು ಆರೋಪಿತರೆಲ್ಲರೂ ಸೇರಿ ದೂಡಿ ಹಾಕಿ ಗಾಯಗೊಳಿಸಿ, ಜೀವ ಬೆದರಿಕೆ ಹಾಕಿರುದಾಗಿ ಆರೋಪಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ ೨೮/೨೦೨೪, ಕಲಂ: ೪೪೮,೫೦೪, ೩೨೩,೫೦೬ ಜೊತೆಗೆ ೩೪ ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya
error: Content is protected !!