ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya


ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯಲ್ಲಿ ಮುಖ್ಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳಾದ ಶರಣ್ಯ,ಕೆ.ಸಿಂಚನ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಕುರಿತು ಮಾಹಿತಿ ನೀಡಿದ ಇವರು ಮುಟ್ಟಿನ ಕಪ್ ಸ್ವಚ್ಚತೆ, ಬಳಕೆ ಮತ್ತು ಅದರ ಮರುಬಳಕೆ, ಉಪಯೋಗವನ್ನು ಹೇಗೆ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದರು.

Leave a Comment

error: Content is protected !!