24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು, ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಪ್ರಣಿತ್ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇದ್ದರು. ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ ನಂ ೩೦/೨೦೨೪ ಕಲಂ: ೧೭೪ ಸಿಆರ್ ಪಿ ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!