April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು, ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಪ್ರಣಿತ್ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇದ್ದರು. ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ ನಂ ೩೦/೨೦೨೪ ಕಲಂ: ೧೭೪ ಸಿಆರ್ ಪಿ ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya
error: Content is protected !!