25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು, ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಪ್ರಣಿತ್ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇದ್ದರು. ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ ನಂ ೩೦/೨೦೨೪ ಕಲಂ: ೧೭೪ ಸಿಆರ್ ಪಿ ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya
error: Content is protected !!