26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು, ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಪ್ರಣಿತ್ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇದ್ದರು. ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ ನಂ ೩೦/೨೦೨೪ ಕಲಂ: ೧೭೪ ಸಿಆರ್ ಪಿ ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!