July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು, ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಪ್ರಣಿತ್ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇದ್ದರು. ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ ನಂ ೩೦/೨೦೨೪ ಕಲಂ: ೧೭೪ ಸಿಆರ್ ಪಿ ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!