25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು, ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಪ್ರಣಿತ್ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇದ್ದರು. ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ ನಂ ೩೦/೨೦೨೪ ಕಲಂ: ೧೭೪ ಸಿಆರ್ ಪಿ ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!