25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ ಮಗು.

ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು, ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಆಗಾಗ ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಪ್ರಣಿತ್ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದ್ದು, ಮೇ 2 ರಂದು ಸಂಜೆ ಮನೆಯವರೆಲ್ಲ ಒಳಗಡೆ ಇದ್ದರು. ಪ್ರಣಿತ್ ಕುಮಾರ್ ಮನೆಯ ಹೊರಗಡೆ ಆಟವಾಡಿಕೊಂಡಿದ್ದ. ನಂತರ ಮನೆಯವರು ಹೊರಗಡೆ ಬಂದು ನೋಡಿದಾಗ ಅಂಗಳದಲ್ಲಿ ಆಟವಾಡುತ್ತಿದ್ದ ಪ್ರಣಿತ್ ಕಂಡು ಬರಲಿಲ್ಲ.

ಮನೆಯವರೆಲ್ಲರೂ ಸೇರಿ ಮನೆಯ ಸುತ್ತಮುತ್ತಲೂ ಹುಡುಕಾಟ ನಡೆಸಿ, ನಂತರ ಮಗು ಕೆರೆಯ ಬಳಿ ಹೋಗಿರಬಹುದು ಎಂದು ಅನುಮಾನಗೊಂಡು ತೋಟದಲ್ಲಿರುವ ಕೆರೆಯ ಬಳಿಗೆ ಬಂದು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಪ್ರಣಿತ್‌ನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ ನಂ ೩೦/೨೦೨೪ ಕಲಂ: ೧೭೪ ಸಿಆರ್ ಪಿ ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಜೈನ ಧರ್ಮದ ಯುಗ ಪ್ರವರ್ತಕ : ಆಚಾರ್ಯಶ್ರೀ ೧೦೮ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರು ಜಿನೈಕ್ಯ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya
error: Content is protected !!