30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.
ತನ್ನ 14 ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!