September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.
ತನ್ನ 14 ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!