22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.
ತನ್ನ 14 ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!