23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.
ತನ್ನ 14 ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ ಅವರು ವಿದ್ಯಾರ್ಜನೆ ಮುಗಿದ ಬಳಿಕ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಲಾವಿದರಾಗಿ 42 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಹಾಸ್ಯದಿಂದ ಪ್ರಾರಂಭಿಸಿ ರಾಜನ ಪಾತ್ರದವರೆಗೆ ಎಲ್ಲಾ ತರಹದ ವೇಷವನ್ನು ಮಾಡಬಲ್ಲ ಸಮರ್ಥ ಕಲಾವಿದರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ಉಂಟಾದ ದು:ಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya
error: Content is protected !!