ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ4 ರಂದು ನಡೆದಿದೆ.

ಸುಮಾರು 42 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಮಹಾರುದ್ರ ಸ್ವಾಮಿ ಎಂದು ಗುರುತಿಸಲಾಗಿದೆ. ಈತ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮಧ್ಯಾಹ್ನದ ವೇಳೆ ಅತಿಯಾದ ಬಿಸಿಲಿನ ತಾಪವಿದ್ದು ಇದರಿಂದಾಗಿ ಬಸವಳಿದು ಬಿದ್ದು ಸಾವನ್ನಾಪ್ಪಿರಬಹುದೇ ಎಂಬ ಅನುಮಾನವೂ ಇದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Leave a Comment

error: Content is protected !!