25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

ಗುರುವಾಯನಕೆರೆ: ರಾಜಧಾನಿ ಬೆಂಗಳೂರಿನ ನಾಗರಬಾವಿ ಲಗ್ಗೆರೆಯ ಸಮೀಪ ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ ಶಾಖೆಯನ್ನು ಪ್ರಖ್ಯಾತ ನಾಡೋಜ ಡಾ.ಹಂಪನಾ ನಾಗರಾಜ ಹಾಗೂ ಸಮಾಜ ಸೇವಕ ಸಾಮಾಜಿಕ ಹೋರಾಟಗಾರ ಮಾಳ ಹರ್ಷೇಂದ್ರ ಜೈನ್ ಮತ್ತು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಜ್ಯೋತಿಷ್ಯ ಪಂಡಿತರಾದ ಬಿ.ಕೆ.ಸುಬಾಷ್ ಚಂದ್ರ ಜೈನ್ ರವರು ಹಲವಾರು ಸಮಾಜದ ಗಣ್ಯ ಮುಖಂಡರ ಉಪಸ್ಥಿತಿಯಲ್ಲಿ ಸರಳವಾಗಿ ಮೇ.02ರಂದು ಉದ್ಘಾಟನೆಗೊಂಡಿತು.

ಡಿಜಿಟಲ್ ಯುಗದ ಈ ದಿನಗಳಲ್ಲಿಯೂ ಕೂಡ ಜ್ಯೋತಿಷ್ಯ ಶಾಸ್ತ್ರ ಸಾರ್ವಜನಿಕ ಜನರ ಜೀವನದ ಒಂದು ಪ್ರಮುಖ ಅಂಗವಾಗಿದ್ದು, ಇದರ ಸದುಪಯೋಗವನ್ನು ಬೆಂಗಳೂರು ಹಾಗೂ ಸುತ್ತಮುತ್ತಲಿನ ಜನತೆ ಉಪಯೋಗ ಪಡೆದುಕೊಂಡು ತಮ್ಮ ಜೀವನವನ್ನು ಸಾರ್ಥಕಗೊಳಿಸಲಿ ಹಾಗೂ ಜ್ಯೋತಿಷ್ಯವನ್ನು ನಂಬಿ ಬರುವ ಬಂಧುಗಳಿಗೆ ಜ್ಯೋತಿಷ್ಯ ಪಂಡಿತರಾದ ಬಿಕೆ ಸುಬಾಷ್ ಚಂದ್ರ ಜೈನ್ ರವರು ಸದಾ ಹಸನ್ಮುಖ ಮತ್ತು ನೇರನುಡಿಯ ಮುಖಾಂತರ ಎಲ್ಲರ ಮನೆ ಮಾತಾಗಿರಲಿ ಎಂದು ನಾಡೋಜ ಹಂಪನಾ ರವರು ತಿಳಿಸಿದರು.

ಮುಖ್ಯ ಅತಿಥಿ ಸಾಮಾಜಿಕ ಹೋರಾಟಗಾರ ಸಮಾಜ ಸೇವಕ ಮಾಳ ಹರ್ಷೇಂದ್ರ ಜೈನ್ ಮಾತನಾಡುತ್ತಾ ಸರಳ ಸ್ವಭಾವದ ಜ್ಯೋತಿಷಿ ಪಂಡಿತ ಬಿಕೆ ಸುಬಾಷ್ ಚಂದ್ರ ಜೈನ್ ರವರು ಬ್ಯಾಂಕ್ ಉದ್ಯೋಗಿಯಾಗಿದ್ದುಕೊಂಡು ಹಲವಾರು ದೀನದಲಿತ ಬಂಧು ಬಳಗದವರಿಗೆ ಸುಮಾರು ನಾಲ್ಕು ದಶಕಗಳ ಕಾಲ ಸೇವೆ ಮಾಡಿ ಕರ್ನಾಟಕದಾದ್ಯಂತ ಜನಪ್ರಿಯರಾಗಿದ್ದು ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಅಭಿರುಚಿ ಹೊಂದಿದ್ದ ಶ್ರೀಯುತರು ಜ್ಯೋತಿಷ್ಯ ಶಾಸ್ತ್ರದಲ್ಲಿ ಪಾಂಡಿತ್ಯ ಪಡೆದು ಸಾರ್ವಜನಿಕ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದರು. ಬೆಳ್ತಂಗಡಿ ತಾಲೂಕಿನಲ್ಲಿ ತಮ್ಮ ಜ್ಯೋತಿಷ್ಯ ಕೇಂದ್ರದ ಮುಖಾಂತರ ಹೆಸರುವಾಸಿಯಾಗಿದ್ದು, ಈ ದಿನ ಬೆಂಗಳೂರಿನಲ್ಲಿ ಅಪಾರ ಬಂಧು ಮಿತ್ರರ ಅಪೇಕ್ಷೆಯ ಮೇರೆಗೆ ನೂತನ ಶಾಖೆಯ ಶುಭಾರಂಭಗೊಂಡಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya
error: Content is protected !!