23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಳ್ತಂಗಡಿ: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3ರಂದು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ಸಮಸ್ಯೆಗಳನ್ನು ಪಡೆದರು.

ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94 CC, ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಸಿಗಲು ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಶೀಘ್ರದಲ್ಲೇ ಪರಿಹರಿಸಲು ಸೂಚನೆ ನೀಡಿದ್ದಾರೆ. ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಸಾವನ್ನಪ್ಪಿದ ಬಳಿಕ ಏಳು ತಿಂಗಳಿನಿಂದ ಪಡಿತರ ಅಕ್ಕಿ ವಿತರಣೆ ಆಗದೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ನೊಂದ ಮಹಿಳೆ ಸುನಿತಾ ಅವರನ್ನು ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದಾಗ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ಮಹಿಳೆಗೆ ಪಡಿತರ ದೊರಕದೆ ಏಳು ತಿಂಗಳಿನಿಂದ ಬಾಕಿಯಾಗಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿ ಮಹಿಳೆಗೆ ಪಡಿತರ ಸಿಗುವಂತೆ ಲೋಕಾಯುಕ್ತ ಅಧಿಕಾರಿಗಳು ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ. ಕುಮಾರ್, ಚೆಲುವರಾಜ್, ಇನ್ಸೆಕ್ಟರ್ ಗಳಾದ ಅಮನುಲ್ಲಾ ಎ, ಸುರೇಶ್.ಕೆ.ಎನ್, ಸುರೇಶ್ ಸಿ.ಎಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!