22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಳ್ತಂಗಡಿ: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3ರಂದು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹಲವು ಸಮಸ್ಯೆಗಳನ್ನು ಪಡೆದರು.

ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94 CC, ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸ್ಥಳದಲ್ಲಿಯೇ ಪುಸ್ತಕ ದಾಖಲೆ ಹಾಗೂ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. 750 ಬಿಪಿಎಲ್ ಕಾರ್ಡ್ ಸಾರ್ವಜನಿಕರಿಗೆ ಸಿಗಲು ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಶೀಘ್ರದಲ್ಲೇ ಪರಿಹರಿಸಲು ಸೂಚನೆ ನೀಡಿದ್ದಾರೆ. ಪುಂಜಾಲಕಟ್ಟೆಯ ಕುಕ್ಕಳ ಗ್ರಾಮದ ಸುನಿತಾ(32) ಎಂಬವರ ಗಂಡ ಅಶೋಕ್ ಸಾವನ್ನಪ್ಪಿದ ಬಳಿಕ ಏಳು ತಿಂಗಳಿನಿಂದ ಪಡಿತರ ಅಕ್ಕಿ ವಿತರಣೆ ಆಗದೆ ಹಲವಾರು ಭಾರಿ ಆಹಾರ ಇಲಾಖೆಯಲ್ಲಿ ಅಲೆದಾಟ ಮಾಡುತ್ತಿದ್ದ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ನೊಂದ ಮಹಿಳೆ ಸುನಿತಾ ಅವರನ್ನು ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸಿದಾಗ ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ಮಹಿಳೆಗೆ ಪಡಿತರ ದೊರಕದೆ ಏಳು ತಿಂಗಳಿನಿಂದ ಬಾಕಿಯಾಗಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳದಲ್ಲಿಯೇ ದಾಖಲೆಯನ್ನು ಸರಿಪಡಿಸಿ ಮಹಿಳೆಗೆ ಪಡಿತರ ಸಿಗುವಂತೆ ಲೋಕಾಯುಕ್ತ ಅಧಿಕಾರಿಗಳು ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ. ಕುಮಾರ್, ಚೆಲುವರಾಜ್, ಇನ್ಸೆಕ್ಟರ್ ಗಳಾದ ಅಮನುಲ್ಲಾ ಎ, ಸುರೇಶ್.ಕೆ.ಎನ್, ಸುರೇಶ್ ಸಿ.ಎಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya
error: Content is protected !!