23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

ಕೊಕ್ಕಡ: ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘ ಅರಸಿನಮಕ್ಕಿ ಇದರ ವಾಷಿ೯ಕೋತ್ಸವವು ಮೇ.2ರಂದು ಶ್ರೀಕಾಲಕಾಮ ಪರಶುರಾಮ ದೇವಸ್ಥಾನದ ಚಿತ್ಪಾವನ ಸಭಾ ಭವನ ದರ್ಬೆತಡ್ಕದಲ್ಲಿ ನಡೆಯಿತು.

ಪರಶುರಾಮ ದೇವರಿಗೆ ಪವಮಾನ ಅಭಿಷೇಕ, ಗಣಹೋಮ, ಸಮಾಜದ ವಟುಗಳಿಗೆ ಬ್ರಹ್ಮೋಪದೇಶ ನೀಡುವ ಕಾಯ೯ಕ್ರಮ ಜರಗಿತು.

ಬಳಿಕ ಸಂಘದ ಮಹಾಸಭೆ ಜರಗಿತು, ನೂತನ ಅಧ್ಯಕ್ಷರಾಗಿ ಶ್ರೀವರದ ಶಂಕರ ದಾಮಲೆ, ಕಾರ್ಯದಶಿ೯ಯಾಗಿ ವೆಂಕಟೇಶ ದಾಮಲೆ ಆಯ್ಕೆಯಾದರು.

ಮೇ.3ರಂದು ವೇದ ಕುಸುಮ ಶಿಬಿರವನ್ನು ಗೋಪಾಲ ಮರಾಠೆ ಫೋಕ೯ಳ, ವತ್ಸಲಾ ಅವರು ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಶಿಬಿರಾಥಿ೯ಗಳಿಗೆ ಯೋಗೀಶ ದಾಮಲೆಯವರು ಮಾತನಾಡಿ ಹಲವು ವರ್ಷಗಳಿಂದ ನಿರಂತರವಾಗಿ ವೇದ ಕುಸುಮ ಶಿಬಿರವು ಚಿತ್ಪಾವನ ಸಭಾ ಭವನದಲ್ಲಿ ಮೇ ತಿಂಗಳಲ್ಲಿ ನಡೆಯುತ್ತಾ ಬಂದಿದೆ. ಈ ಶಿಬಿರದಲ್ಲಿ ಸಮಾಜದ ಹಲವು ವಟುಗಳು ನಿತ್ಯಾಹ್ನಿಕ, ಸಂಧ್ಯಾವಂದನೆ ಮತ್ತು ಪೂಜಾ ವಿಧಿಗಳನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಾಥ೯ಕತೆಯನ್ನು ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಶಿಬಿರವು ಮೇ.12ರ ವರೆಗೆ ನಡೆಯಲಿದೆ ಎಂದರು.

ಶಿಬಿರದಲ್ಲಿ ಸಮಾಜದ ವಟುಗಳಿಗೆ ಸಂಧ್ಯಾವಂದನೆ, ಅಥವ೯ಶೀಷ೯, ಪುರುಷ ಸೂಕ್ತ, ಪುಷ್ಪಾಂಜಲಿಗಳನ್ನು ಹತ್ತು ದಿನಗಳ ಕಾಲದವರೆಗೆ ಗುರುಕುಲ ಮಾದರಿಯಲ್ಲಿ ಕಲಿಸಲಾಗುವುದು. ಗುರುಗಳಾಗಿ ಗೋಪಾಲ ಮರಾಠೆಯವರು ಸೇವೆ ಸಲ್ಲಿಸುತ್ತಾರೆ,

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!