39.2 C
ಪುತ್ತೂರು, ಬೆಳ್ತಂಗಡಿ
March 29, 2025
Uncategorized

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

ಬೆಳ್ತಂಗಡಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷ ಸೇವೆ ಸಲ್ಲಿಸಿರುವ ಬೆಳ್ತಂಗಡಿಯ ಗಣೇಶ್ ಬಿ.ಎಲ್. ಇವರು ಮೇ 2ರಂದು ನಿವೃತ್ತಿಯಾಗಿದ್ದು ಇಂದು (ಮೇ4) ಹುಟ್ಟೂರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಮೆರವಣಿಗೆ ಮೂಲಕ ಅವರ ಲಾಯಿಲ ಮನೆಗೆ ಆಗಮಿಸಿದರು.

ಈ ವೇಳೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮರಾಟಿ ಸೇವಾ ಸಂಘದ ಉಮೇಶ್ ಕೇಲ್ತಡ್ಕ, ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಇವರ ಸೇವೆ ಬಗ್ಗೆ ಮಾತನಾಡಿ ಶುಭ ಕೋರಿದರು.

ನಿವೃತ್ತ ಯೋಧ ಗಣೇಶ್ ಬಿ.ಎಲ್ ಮಾತನಾಡಿ ಸೈನಿಕರಿಗೆ ನೀಡಿರುವ ಇಂತಹ ಗೌರವಕ್ಕೆ ಅಭಾರಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ನೋಟರಿ ವಕೀಲ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಬಿ.ಎಲ್, ಪದಾಧಿಕಾರಿಗಳು ಮತ್ತು ವಕೀಲರು, ಮರಾಟಿ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಕುಟುಂಬ ವರ್ಗದವರು, ನಾಗರಿಕರು ಉಪಸ್ಥಿತರಿದ್ದು ಶುಭ ಕೋರಿದರು.

ಮರಾಟಿ ಸೇವಾ ಸಂಘದ ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ್ ಬಡಕೊಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya
error: Content is protected !!